ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರೇಷನ್ ಕಾರ್ಡ್ ಹೊಂದಿರುವ ನಾಗರಿಕರಿಗೆ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ. ಕಳೆದ ಮೂರು-ನಾಲ್ಕು ತಿಂಗಳ ಹಿಂದೆ ಎಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸುವ ಮತ್ತು ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಸರ್ಕಾರ ಕೈಗೊಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆ ನಂತರ ರೇಷನ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆಯನ್ನು ಸರ್ಕಾರ ತಾತ್ಕಾಲಿಕವಾಗಿ ನಿಲ್ಲಿಸಿತ್ತು. ಆದರೆ, ಇದೀಗ ಮತ್ತೆ ರೇಷನ್ ಕಾರ್ಡ್ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದರಿಂದಾಗಿ ರಾಜ್ಯದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆ ಮತ್ತೆ ಪ್ರಾರಂಭವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರೇಷನ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ:
ಕರ್ನಾಟಕದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆಯು ಇನ್ನೂ ಮುಗಿಯುವ ಸೂಚನೆಗಳು ಕಾಣಿಸುತ್ತಿಲ್ಲ. ಸರ್ಕಾರವು ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದೆ. ವಿಧಾನಸಭೆಯ ಅಧಿವೇಶನ ಮುಗಿದ ನಂತರ ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಣೆಗೆ ಒಳಪಡಿಸುವುದಾಗಿ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ರೇಷನ್ ಕಾರ್ಡ್ಗಳ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯದ ರೇಷನ್ ಕಾರ್ಡ್ ಹೊಂದಿರುವ ನಾಗರಿಕರು ಸಹಕಾರ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ. ಈ ಬಗ್ಗೆ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದ್ದಾರೆ.
20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳು:
ಕಳೆದ ಒಂದು ವರ್ಷದಿಂದಲೂ ರಾಜ್ಯದಲ್ಲಿ ಅನಧಿಕೃತ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ಶಾಕ್ ನೀಡುತ್ತಿದೆ. ಇದೀಗ ಕರ್ನಾಟಕದಲ್ಲಿ ಒಟ್ಟು 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳಿವೆ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಒಟ್ಟು 1.10 ಕೋಟಿ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ. ಇದರಲ್ಲಿ ಸುಮಾರು 20 ಲಕ್ಷ ಕಾರ್ಡ್ಗಳು ಅನರ್ಹವೆಂದು ಸರ್ಕಾರ ಗುರುತಿಸಿದೆ. ಇವುಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಹೊಸ ಬಿಪಿಎಲ್ ಕಾರ್ಡ್ಗಳಿಗೆ ಖುದ್ದು ಪರಿಶೀಲನೆ:
ಅನರ್ಹರು ರೇಷನ್ ಕಾರ್ಡ್ ಪಡೆಯುತ್ತಿರುವ ಸಮಸ್ಯೆಯನ್ನು ನಿವಾರಿಸಲು ಹೊಸ ಬಿಪಿಎಲ್ ಕಾರ್ಡ್ಗಳನ್ನು ನೀಡುವಾಗ ಖುದ್ದು ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಗ್ರಾಮ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಕಾರ್ಯದರ್ಶಿ ಮತ್ತು ಕಂದಾಯ ನಿರೀಕ್ಷಕರು ಇರುವ ಸಮಿತಿಯನ್ನು ರಚಿಸಲಾಗಿದೆ.
ಹೊಸ ಬಿಪಿಎಲ್ ಕಾರ್ಡ್ದಾರರಿಗೆ ಶುಭವಾರ್ತೆ:
ಹೊಸ ಬಿಪಿಎಲ್ ರೇಷನ್ ಕಾರ್ಡ್ದಾರರಿಗೂ ಸರ್ಕಾರ ಶುಭವಾರ್ತೆ ನೀಡಿದೆ. ಕಳೆದ ಎರಡು ವರ್ಷಗಳಿಂದ (2023ರಿಂದ) ಇಲ್ಲಿಯವರೆಗೆ ರೇಷನ್ ಕಾರ್ಡ್ಗಾಗಿ ಒಟ್ಟು 2,95,986 ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ 2,04,760 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ 91 ಸಾವಿರ ಅರ್ಜಿಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಇವುಗಳಲ್ಲಿ 60 ಸಾವಿರ ಅನರ್ಹ ಬಿಪಿಎಲ್ ಅರ್ಜಿಗಳಿವೆ ಎಂದು ಸಚಿವರು ತಿಳಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುವುದಾಗಿ ಕೆ.ಎಚ್. ಮುನಿಯಪ್ಪ ಅವರು ಭರವಸೆ ನೀಡಿದ್ದಾರೆ.
ಈ ಕ್ರಮದಿಂದ ರಾಜ್ಯದಲ್ಲಿ ರೇಷನ್ ಕಾರ್ಡ್ ವ್ಯವಸ್ಥೆ ಹೆಚ್ಚು ಪಾರದರ್ಶಕವಾಗಲಿದೆ ಮತ್ತು ಅನರ್ಹರು ಈ ಸೌಲಭ್ಯವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.