ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಜಾರಿ ಒಂದು ವಾರ ಮುಂದಕ್ಕೆ ಹೋಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸಿ ಹಣ ಎಂದು ಬರುತ್ತದೆ ಎಂದು ಕಾಯುತ್ತಿದ್ದಾರೆ. ಹೀಗೆ ಕಾಯುತ್ತಿರುವ ಜನರಿಗೆ ಸರ್ಕಾರವು ಒಂದು ಶಾಕಿಂಗ್ ನ್ಯೂಸ್ ನೀಡಿದೆ. ಅದೇನೆಂದರೆ, ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂಗಳ ಡೆಪಾಸಿಟ್ ಮಾಡುವ ದಿನಾಂಕ ಒಂದು ವಾರಕ್ಕೆ ಮುಂದೂಡಲಾಗಿದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವತ್ತು ಖಾತೆಗೆ ಬರುತ್ತದೆ?, ಏಕೆ ದಿನಾಂಕವನ್ನು ಮುಂದೂಡಲಾಗಿದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಹಣ ಬರಲು ಇನ್ನೂ ಒಂದು ವಾರ ಹೆಚ್ಚು ಕಾಯಿರಿ :
ಗೃಹ ಲಕ್ಷ್ಮಿ ಯೋಜನೆಯು (Gruha Lakshmi Scheme) ಕರ್ನಾಟಕದ ಸಾವಿರಾರು ಬಡ ಕುಟುಂಬಗಳಿಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ. ಮಹಿಳೆಯರನ್ನು ಪ್ರೋತ್ಸಾಹಿಸುವ ಮೂಲಕ ಮಹಿಳೆಯರಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಲಿದೆ. ಈ ಯೋಜನೆಯು ಕುಟುಂಬಗಳಿಗೆ ಭದ್ರತೆ ಮತ್ತು ಸ್ಥಿರತೆಯ ಭಾವನೆಯನ್ನು ನೀಡಲಿದೆ. ಕರ್ನಾಟಕ ಗೃಹ ಲಕ್ಷ್ಮಿ ase (Gruha Lakshmi Yojana), ಪ್ರತಿ ಅರ್ಹ ಮಹಿಳೆಗೆ ಮಾಸಿಕ ರೂ. 2,000 ರೂ ಅವರ ಖಾತೆಗೆ ಜಮಾ ಆಗಲಿದೆ.
ಇದೇ ಆಗಸ್ಟ್ ತಿಂಗಳಿನ 16ನೇ ತಾರೀಕಿನಂದು ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರದ ಹಣವನ್ನು ಅರ್ಹ ಮಹಿಳೆಯರಿಗೆ ಡೆಪಾಸಿಟ್ ಮಾಡಲಾಗುವುದು ಎಂದು ಸರ್ಕಾರ ಆದೇಶವನ್ನು ನೀಡಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಚಾಲನೆ ನೀಡಿದ್ದಾರೆ. ಆದರೆ ರಾಜ್ಯದ ಗೃಹಲಕ್ಷ್ಮಿಯರು ಕಾತುರದಿಂದ ಎದುರು ನೋಡುತ್ತಿರುವ ಗೃಹಲಕ್ಷ್ಮಿ ಯೋಜನೆಯ ಜಾರಿ ಮುಂದೂಡಿಕೆ ಆಗುವ ಸಾಧ್ಯತೆಗಳು ಇದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರೋಕ್ಷಗಾಗಿ ಸೂಚನೆ ಕೊಟ್ಟಿದ್ದಾರೆ.
ಇದೇ ಆಗಸ್ಟ್ 15ನೇ ದಿನದಂದು ಸ್ವತಂತ್ರ ದಿನಾಚರಣೆಯ ನಂತರ, ಆಗಸ್ಟ್ 16ನೇ ದಿನಾಂಕದ ಒಳಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೊದಲ ತಿಂಗಳ 2,000 ರೂಪಾಯಿಗಳನ್ನು ಜಮಾ ಮಾಡೋದಾಗಿ ಹೇಳಿದ್ದರು. ಆದರೆ, ಗೃಹಲಕ್ಷ್ಮಿ ಯೋಜನೆಯನ್ನು ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜ್ಯಕ್ಕೆ ಕರೆಯಿಸಿ ಚಾಲನೆ ನೀಡಲು ಸರ್ಕಾರವು ಆಲೋಚಿಸಿದೆ ಆದ್ದರಿಂದ ಆಗಸ್ಟ್18 ಅಥವಾ 20ರಂದು ಡಿ ಬಿ ಟಿ ಮುಖಾಂತರ ಮನೆಯ ಯಜಮಾನಿ ಗೆ ಹಣ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈ ಕೆಳಗಿನವರಿಗೆ ಹಣ ಬರೋದಿಲ್ಲ :
ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ ಎಂದು ಸುದ್ದಿಗಳು ಹೇಳುತ್ತಿವೆ. ಅದೇನೆ ಇದ್ದರೂ ಒಂದು ಒಂದು ಬಾರಿ ಹಣ ಜಮಾ ಆದ ನಂತರ ಯಾರ್ಯಾರಿಗೆ ಬಂದಿದೆ ಎಂದು ತಿಳಿಯಿತ್ತದೆ.
ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ