Free Borewell : ಗಂಗಾ ಕಲ್ಯಾಣ ಯೋಜನೆಯಲ್ಲಿ ಉಚಿತ ಬೋರ್ ವೆಲ್ ಪಡೆಯಲು ಹೀಗೆ ಅಪ್ಲೈ ಮಾಡಿ!

IMG 20240806 WA0001

ಸರ್ಕಾರದಿಂದ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ (Ganga Kalyana Scheme) ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು (Free Borewell Scheme) ಅರ್ಜಿ ಆಹ್ವಾನ.!

ರೈತರಿಗೆ  ಕೃಷಿ ಮಾಡಲು ಬಹಳ ಮುಖ್ಯವಾಗಿ ಬೇಕಾಗಿರುವುದು ನೀರು. ಕೃಷಿ ಚಟುವಟಿಕೆಗಳಲ್ಲೇ ಅತ್ಯಮೂಲ್ಯವಾಗಿ ಬೇಕಾಗಿರುವುದು ನೀರಿನ ವ್ಯವಸ್ಥೆ. ಹಾಗೆ ನೋಡುವುದಾದರೆ ನೀರು ಇಲ್ಲದೆ ಯಾವ ಕೃಷಿ ಮಾಡಲು ಅಸಾಧ್ಯ. ಬರಗಾಲದ ಸಮಯದಲ್ಲಿ ರೈತಪಡುವ ಕಷ್ಟ ಹೇಳತಿರದು. ಕೇವಲ ಮಳೆಯನ್ನೇ ನಂಬಿಕೊಂಡು ಕೃಷಿ ಮಾಡಲು ಅಸಾಧ್ಯ. ಆದ್ದರಿಂದ ರೈತ ಕೃಷಿ ಚಟುವಟಿಕೆಗಳಿಗೆ ಬೋರ್ವೆಲ್ ಗಳನ್ನು ಕೊರೆಸಿ ನೀರನ್ನು ಸಸ್ಯಗಳಿಗೆ ಒದಗಿಸುತ್ತಾನೆ.ಆದ್ದರಿಂದ ಸರ್ಕಾರ ಕೃಷಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್‌ಗಳನ್ನು (Free Borewell)ಕೊರೆಸಿ ಕೊಡಲಾಗುತ್ತದೆ. 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್‌ಗಾಗಿ (Free Borewell) ರಾಜ್ಯ ಸರ್ಕಾರ(State Govt) ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾರೆಲ್ಲಾ ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿರುವಂತಹ ಯೋಜನೆ. ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದರಿಂದ ಬೆಳೆಗಳನ್ನು ಬೆಳೆದುಕೊಂಡು ಆದಾಯವನ್ನು ಹೆಚ್ಚಿಸಿಕೊಳ್ಳಬಹುದು.ಈಗಾಗಲೇ ಅನೇಕೆ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಸಹಾಯಧನದ ಮೊತ್ತ ಎಷ್ಟು?

ಈ ಯೋಜನೆ ಲಾಭ ಪಡೆಯಲು ಯಾರಿಲ್ಲ ಅರ್ಜಿಗಳನ್ನು ಹಾಕಿರುತ್ತಾರೋ ಅವರು ಆಯ್ಕೆಯಾದರೆ ಬೋರ್ವೆಲ್ ಮಾಡಲು ಸರ್ಕಾರ ಹಣ ಕೊಡುತ್ತೆ.ಬೆಂಗಳೂರು ಸುತ್ತಲಿನ ಜಿಲ್ಲೆಗಳಲ್ಲಿ ಅಂದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಬೋರ್ವೆಲ್ ಮಾಡಲು ಒಟ್ಟು 4,75,000 ರೂಪಾಯಿ ಖರ್ಚಾಗುತ್ತದೆ. ಅದರಲ್ಲಿ ಸರ್ಕಾರ 4,25, 00 ರೂಪಾಯಿ ಕೊಡುತ್ತದೆ. ಉಳಿದ ಹಣವನ್ನು ಶೇ.4ರ ಬಡ್ಡಿ ದರದಲ್ಲಿ ಸಾಲದ ರೂಪದಲ್ಲಿ ನೀಡುತ್ತದೆ. ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಿಗೆ ಒಟ್ಟು ಖರ್ಚು 3,75,000 ರೂಪಾಯಿ ಆಗುತ್ತದೆ.ಅದರಲ್ಲಿ ಸರ್ಕಾರ 3,25,000 ರೂಪಾಯಿ ಕೊಡುತ್ತದೆ.ಉಳಿದ ಹಣವನ್ನು ಶೇ.4ರ ಬಡ್ಡಿ ದರದಲ್ಲಿ ಸಾಲದ ರೂಪದಲ್ಲಿ ನೀಡುತ್ತದೆ. ಇದರ ಜೊತೆಯಲ್ಲಿ ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ ಕೊಡಲು 75,000 ರೂಪಾಯಿಯನ್ನು ಸರ್ಕಾರವೇ ನೀಡುತ್ತದೆ.

ಈ ಯೋಜನೆಗೆ ಅರ್ಜಿ ಹಾಕಲು ಯಾರು ಅರ್ಹರು (Qualifications) ?

ಮೊದಲಿಗೆ ಅರ್ಜಿದಾರನ ಆದಾಯ ವರ್ಷಕ್ಕೆ 98,000(ಗ್ರಾಮಾಂತರದವರಿಗೆ) 1,20,000 (ಪಟ್ಟಣ ಪ್ರದೇಶದವರಿಗೆ) ರೂಪಾಯಿಗಿಂತ ಕಡಿಮೆ ಇರಬೇಕು.
ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು.
ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು, ಆ ಜಮೀನು ಒಂದೇ ಸ್ಥಳದಲ್ಲಿರಬೇಕು. (ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು).
ಈಗಾಗಲೇ ಆಯಾ ಜಾತಿ ಸಮುದಾಯದ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಅರ್ಜಿದಾರನು ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಈ ಯೋಜನೆಯ ಪ್ರಯೋಜನ ಪಡೆಯಬೇಕೆಂದರೆ ರೈತರು ಯಾವುದೇ ರೀತಿಯ ನೀರಾವರಿ ಸೌಲಭ್ಯ ಹೊಂದಿಲ್ಲದವರಾಗಿರಬೇಕು.
ಅರ್ಜಿದಾರನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಹುದ್ದೆಯಲ್ಲಿ ಇರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು (Documents) ?

ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್.
ಸಣ್ಣ/ಅತಿ ಸಣ್ಣ ರೈತರ ದೃಢೀಕರಣ ಪತ್ರ.
ರೈತರ ಈIಆ ಸಂಖ್ಯೆ.
ಜಮೀನಿನ ಪಹಣಿ (RTC).

ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು?:

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಗಳನ್ನು ರಾಜ್ಯದ ವಿವಿಧ ಜಾತಿ ಸಮುದಾಯಗಳಿಗೆ ಮೀಸಲಾಗಿರುವ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಹಿಂದುಳಿದ ವರ್ಗದ ರೈತರು.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ವೀರಶೈವ-ಲಿಂಗಾಯತ ರೈತರು.
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಒಕ್ಕಲಿಗ ಸಮುದಾಯದ ರೈತರು.
ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ವಿಶ್ವಕರ್ಮ ಸಮುದಾಯದ ರೈತರು.
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಉಪ್ಪಾರ ಸಮುದಾಯದ ರೈತರು.
ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಅಂಬಿಗರ ಸಮುದಾಯದ ರೈತರು.
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಸವಿತಾ ಸಮುದಾಯದ ರೈತರು.
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಮಡಿವಾಳ ಸಮುದಾಯದ ರೈತರು.
ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಕಾಡುಗೊಲ್ಲ ಸಮುದಾಯದ ರೈತರು.
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ರೈತರು.

ಎಲ್ಲಿ ಅರ್ಜಿ ಸಲ್ಲಿಸಬೇಕು.?

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
https://sevasindhu.karnataka.gov.in/Sevasindhu/Kannada

ಗಮನಿಸಿ (Notice) :
ಕೊಟ್ಟಿರುವ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಸೇವಾಸಿಂಧು ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 31-08-2024. ಅಂಬಿಗ ಹಾಗೂ ಒಕ್ಕಲಿಗ ಸಮುದಾಯದ ರೈತರು ಅರ್ಜಿ ಸಲ್ಲಿಸಲು 30-08-2024 ಕೊನೆಯ ದಿನವಾಗಿದೆ.

ಈ ಮಾಹಿತಿಗಳನ್ನು ಓದಿ

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!