ಗ್ಯಾರಂಟಿ ಯೋಜನೆಗಳ (Guarantee Scheme)ಹಣ ಶೀಘ್ರವೇ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ಭರವಸೆ
ರಾಜ್ಯ ಸರ್ಕಾರದ ಬಹುಮುಖ್ಯ ಯೋಜನೆಗಳಾದ ಗ್ಯಾರಂಟಿ (Guarantee Scheme) ಯೋಜನೆಗಳ ಹಣ ಬಿಡುಗಡೆ ಕುರಿತು ಗೊಂದಲದ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆಗದೇ ಇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ಯಾರಂಟಿ ಯೋಜನೆಗಳ ಹಣ ಪಾವತಿ ವಿಳಂಬದ ಪ್ರಶ್ನೆ:
ರಾಜ್ಯ ಸರ್ಕಾರವು (State Government) ಜನಪರ ಯೋಜನೆಗಳಡಿ ಹಲವು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ, ಉದಾಹರಣೆಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಶುನ್ಯ ಬಡ್ಡಿದರ, ರೈತರ ಸಾಲ ಮನ್ನಾ ಹೀಗಿ ಹಲವು ಯೋಜನೆಗಳನ್ನು ಪರಿಚಯಿಸಿದೆ. ಇತ್ತೀಚೆಗೆ, ಈ ಯೋಜನೆಗಳಡಿ ನೀಡಬೇಕಾದ ಹಣ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ವಿಶೇಷವಾಗಿ 5 ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ (Annabhagya Scheme) ಹಣ ಮತ್ತು 3 ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗಿಲ್ಲ ಎಂಬ ಪ್ರಶ್ನೆ ವಿಧಾನಸೌಧದಲ್ಲಿ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಹಣ ಪಾವತಿ ಮಾಡದೇ ಹೋದರೆ, ತಕ್ಷಣವೇ ಪಾವತಿ ಮಾಡಿಸುತ್ತೇವೆ. ಆದರೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಈ ಯೋಜನೆಗಳು ಮುಂದುವರಿಯುತ್ತವೆ” ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರದ(State government ) ಆರ್ಥಿಕ ಸ್ಥಿತಿ ಹೇಗಿದೆ :
ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಪ್ರತಿಪಕ್ಷಗಳು ಟೀಕೆ ಮಾಡುತ್ತಾ ಬಂದಿವೆ. ಆದರೆ ಮುಖ್ಯಮಂತ್ರಿ ಇದಕ್ಕೆ ತಿರುಗೇಟು ನೀಡಿದ್ದು , ರಾಜ್ಯಕ್ಕೆ ಯಾವುದೇ ಆರ್ಥಿಕ ತೊಂದರೆ ಇಲ್ಲ, ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದರ ಜೊತೆಗೆ, ಸಾರ್ವಜನಿಕರ ಆತಂಕ (Public anxiety) ನಿವಾರಿಸಲು ಯೋಜನೆಗಳಡಿ ಬಾಕಿ ಇರುವ ಎಲ್ಲಾ ಪಾವತಿಗಳನ್ನು ಶೀಘ್ರವೇ ಖಾತೆಗಳಿಗೆ ಜಮಾ ಮಾಡಲಾಗುವುದು ಎಂಬ ವಿಶ್ವಾಸವನ್ನು ನೀಡಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ವಿಳಂಬವಾದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ತಕ್ಷಣವೇ ಸರಿಪಡಿಸುವ ಭರವಸೆ ನೀಡಿದ್ದಾರೆ. ಸರ್ಕಾರವು (Government) ಈ ಜನಪರ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂಬ ಭರವಸೆ ನೀಡಿದರು.
ಹೌದು ಕಳೆದ 3 ತಿಂಗಳಿನಿಂದ ಹಣ ಜಮಾ ಆಗಿಲ್ಲ ಎಂದು ರಾಜ್ಯದ ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದೂ 3 ತಿಂಗಳ ಒಟ್ಟು 6000/- ರೂಪಾಯಿ ಮನೆ ಯಜಮಾನಿಯರಿಗೆ ಜಮಾ ಆಗಬೇಕಿದೆ. ಇನ್ನೇನು ಹಂತ ಹಂತ ವಾಗಿ ಎಲ್ಲಾ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ 6000/- ಪೆಂಡಿಂಗ್ ಹಣ ಜಮಾ ಆಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಜನವರಿ ತಿಂಗಳ ಅನ್ನ ಭಾಗ್ಯದ ಅಕ್ಕಿ ಹಣ ಜಮಾ
ಬಿಪಿಎಲ್ ಕಾರ್ಡ್ ಮತ್ತು ಅಂತೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ದವಸ ಧಾನ್ಯಗಳ ಜೊತೆ ಉಚಿತವಾಗಿ ಹಣ ಕೂಡ ಲಭ್ಯವಾಗುತ್ತಿದೆ. ಈಗಾಗಲೇ ಕಳೆದ ಜನವರಿ ತಿಂಗಳ ಅನ್ನಭಾಗ್ಯದ 680 ರೂಪಾಯಿ ಹಣ ಬ್ಯಾಂಕ್ ಖಾತೆಗೆ ಬಂದಿರುವುದನ್ನ ನೀವು ಕೆಳಗಡೆ ಗಮನಿಸಬಹುದು.
![WhatsApp Image 2025 02 02 at 7.09.11 AM](https://www.needsofpublic.in/wp-content/uploads/2025/02/WhatsApp-Image-2025-02-02-at-7.09.11-AM-770x1024.jpeg)
ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿ ನೀವು ಚೆಕ್ ಮಾಡಿಕೊಳ್ಳಿ.
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
![h2](https://www.needsofpublic.in/wp-content/uploads/2023/07/h2.jpg)
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
![h3](https://www.needsofpublic.in/wp-content/uploads/2023/07/h3.jpg)
ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
![OCT 1](https://www.needsofpublic.in/wp-content/uploads/2023/11/OCT-1.png)
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.